- Advertisement -
- Advertisement -
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ. ಈ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಬೆ0ಗಳೂರಿನಿ0ದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಡ್ಕಾರಿನ ಅಯ್ಯಪ್ಪ ಮಂದಿರದ ಬಳಿ ಪಲ್ಟಿಯಾಗಿದೆ. ಈ ಅಪಘಾತಕ್ಕೆ ಚಾಲಕನಿಗೆ ನಿದ್ರೆ ಆವರಿಸಿರುವುದೇ ಕಾರಣವಾಗಿದೆ ಎಂದು ತಿಳಿದು ಬಂದಿದೆ. ರಸ್ತೆ ಬದಿಯ ಕಬ್ಬಿಣದ ತಡೆಬೇಲಿಗೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿಯಾಗಿದೆ.
ಕಾರಿನಲ್ಲಿ ಚಾಲಕ ಮಾತ್ರ ಇದ್ದುದರಿಂದ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಕಾರು ಸಂಪೂರ್ಣ ಜಖಂಗೊ0ಡಿದೆ.
- Advertisement -