Monday, May 6, 2024
spot_imgspot_img
spot_imgspot_img

ಕಾರಿಗೆ ಡಿಕ್ಕಿ ಹೊಡೆದ ಲಾರಿ; ಯುವಕ ಮೃತ್ಯು

- Advertisement -G L Acharya panikkar
- Advertisement -

ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕೊಡಗು ಜಿಲ್ಲೆಯ ಯುವಕ ಮೃತಪಟ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಸುಂಟಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ನಿವೃತ್ತ BSNL ಉದ್ಯೋಗಿ ಹಾಗೂ ಶ್ರೀ ಕುರುಂಬ ಭಗವತಿ ಕೊಡಂಗಲೂರಮ್ಮ ದೇವಸ್ಥಾನದ ಮುಖ್ಯಸ್ಥರಾದ ರಾಜಣ್ಣ ಅವರ ಪುತ್ರ ರಂಜನ್ (35) ಮೃತಪಟ್ಟವರಾಗಿದ್ದಾರೆ. ಆಮೇಜಾನ್ ಕಂಪನಿಯ ಉದ್ಯೋಗಿಯಾಗಿದ್ದ ರಂಜನ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಮ್ಯಾನೇಜರ್ ಹುದ್ದೆಗೆ ಬಡ್ತಿ ನೀಡಲಾಗಿತ್ತು.

ಮಧ್ಯಾಹ್ನ ಬಾಗಲಕೋಟೆಯಲ್ಲಿ ಸ್ನೇಹಿತರೊದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಇವರಿದ್ದ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಗಂಭೀರ ಸ್ವರೂಪದ ಗಾಯವಾಗಿದ್ದ ರಂಜನ್ ಮತ್ತು ಇನ್ನಿಬ್ಬರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ಆದರೆ ಇವರ ಪೈಕಿ ಚಿಕಿತ್ಸೆ ಫಲಕಾರಿಯಾಗದೇ ರಂಜನ್ ರಾತ್ರಿ ಕೊನೆಯುಸಿರೆಳೆದಿದ್ದಾರೆ.

- Advertisement -

Related news

error: Content is protected !!