- Advertisement -
- Advertisement -





ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಬೇತೂರುಪಾರದಲ್ಲಿ ನಡೆದಿದೆ.
ಮೃತ ಪಟ್ಟವರನ್ನು ಸ್ಕೂಟರ್ ಸವಾರ ಕೆ.ಕೆ ಕೃಷ್ಣನ್ ( 71) ಮತ್ತು ಪತ್ನಿ ಚಿತ್ರಕಲಾ ( 57) ಎಂದು ಗುರುತಿಸಲಾಗಿದೆ.
ಕೃಷ್ಣನ್ ಕೇರಳ ವರ್ತಕರ ಸಂಘದ ಸಮನ್ವಯ ಸಮಿತಿ ಸದಸ್ಯರಾಗಿದ್ದರು. ಬೇಡಡ್ಕದಲ್ಲಿ ವಸ್ತ್ರ ಮಳಿಗೆ ಮಾಲಕರಾಗಿದ್ದರು.
ಬೋವಿಕ್ಕಾನ – ಕುತ್ತಿ ಕೋಲ್ ರಸ್ತೆಯ ಬೇತೂರು ಪಾರ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಇಬ್ಬರೂ ಕಾಸರಗೋಡು ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು , ಪರಿಸರ ವಾಸಿಗಳು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಿಕೊಳ್ಳಲಾಗಿಲ್ಲ. ಮೃತ ದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ ಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -