Monday, May 6, 2024
spot_imgspot_img
spot_imgspot_img

ನೆಲ್ಯಾಡಿ : ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಗಂಭೀರ

- Advertisement -G L Acharya panikkar
- Advertisement -

ನೆಲ್ಯಾಡಿ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಇಚ್ಚಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಚರ್ಚ್ ಬಳಿ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರ ಕಡಬ ತಾಲೂಕು ಬಲ್ಯ ಗ್ರಾಮದ ಕಂಚಿನಡ್ಕ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ.

ಸುಬ್ರಹ್ಮಣ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಕಾರು ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸಮೇತ ರಸ್ತೆಗೆ ಸವಾರ ಎಸೆಯಲ್ಪಟ್ಟು ಗಂಭೀರ ಗಾಯಳಾಗಿವೆ ಎಂದು ತಿಳಿದು ಬಂದಿದೆ.

ಬೈಕ್ ಗೆ ಕಾರು ಡಿಕ್ಕಿಯಾದರೂ ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದರು. ಸ್ಥಳೀಯ ಯುವಕರು ಕಾರನ್ನು ಬೆನ್ನಟ್ಟಿ ಕಾರ್ಯತಡ್ಕ ಎಂಬಲ್ಲಿ ತಡೆದು ನಿಲ್ಲಿಸಿದ್ದಾರೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಆನಂದ ಶೆಟ್ಟಿ ಅವರು ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!