- Advertisement -
- Advertisement -
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಮೃತಪಟ್ಟವರು ಬೈಕ್ ಸವಾರರಾದ ಶ್ರೀಧರ್ (28), ಮುನಿರಾಜು (25) ಎಂದು ಗುರತಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮುನಿರಾಜುನನ್ನ ಬೈಕ್ನಲ್ಲಿ ಆಸ್ಪತ್ರೆಗೆ ಶ್ರೀಧರ್ ಕರೆದುಕೊಂಡು ಹೋಗುತ್ತಿದ್ದನು. ಈ ವೇಳೆ ಜೋಗಿಹಳ್ಳಿ ಬಳಿ ಬರುತ್ತಿದ್ದಂತೆ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
- Advertisement -