Saturday, May 4, 2024
spot_imgspot_img
spot_imgspot_img

ಟ್ರ‍್ಯಾಕ್ಟರ್‌ಗೆ ಕಾರು ಡಿಕ್ಕಿ; ಇಬ್ಬರು ಸಾವು, ಐವರು ಗಂಭೀರ..!

- Advertisement -G L Acharya panikkar
- Advertisement -

ಸಂಬಂಧಿಕರ ಮದುವೆ ಸಮಾರಂಭಕ್ಕೆ ಕುಟುಂಬ ಸಮೇತರಾಗಿ ಹೋಗಿ ವಾಪಸ್ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತವಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರು ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ನಿವಾಸಿಗಳಾದ ಅರುಣ್ ಶೆಟ್ಟರ್ (50) ಹಾಗೂ ತಾಯಿ ವಿಜಯಲಕ್ಷ್ಮಿ ಶೆಟ್ಟರ್ (70) ಎಂದು ಗುರುತಿಸಲಾಗಿದೆ.

ಕುಟುಂಬಸ್ಥರೆಲ್ಲಾ ಸೇರಿ ಮದುವೆಗೆಂದು ತುಮಕೂರಿಗೆ ಹೋಗಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಸಂದರ್ಭ ದಾವಣಗೆರೆ ಬಳಿಯ ಶಿರಮಗೊಂಡನಹಳ್ಳಿ ಸೇತುವೆ ಮೇಲೆ ವೇಗವಾಗಿ ಬಂದ ಕಾರ್ ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಗಾಯಗೊಂಡವರಲ್ಲಿ ಕೆಲವರ ಪರಿಸ್ಥಿತಿ ಗಂಭೀರವಾಗಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!