Friday, May 3, 2024
spot_imgspot_img
spot_imgspot_img

ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು

- Advertisement -G L Acharya panikkar
- Advertisement -

ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.

ಕೌತಮಾರನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರೀತಮ್(15) ಮತ್ತು ವಿಜಯಕುಮಾರ್(15) ಮೃತಪಟ್ಟವರು. ಇವರಿಬ್ಬರು ಕ್ಯಾತಸಂದ್ರದ ಸರಕಾರಿ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.

ಗುರುವಾರ ರಾತ್ರಿ 10:30ರ ವೇಳೆ ಈ ಅಪಘಾತ ಸಂಭವಿಸಿದೆ. ಪ್ರೀತಮ್ ಅವರ ಸಹೋದರಿಯನ್ನು ಕರೆದುಕೊಂಡು ಬರಲು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!