Thursday, May 16, 2024
spot_imgspot_img
spot_imgspot_img

ಮರಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!’

- Advertisement -G L Acharya panikkar
- Advertisement -

ಮರಕ್ಕೆ ಕಾರು ಗುದ್ದಿದ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆಯ ನ್ಯಾಮತಿ ಬಳಿಯ ದಾನಿಹಳ್ಳಿ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಸಿದ್ದೇಶ್ (34 ) ಎಂದು ಗುರುತಿಸಲಾಗಿದೆ.

ದಾವಣಗೆರೆ DAR ಪೊಲೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದೇಶ್ ಮಂಗಳೂರಿಗೆ ಹೊರಟಿದ್ದರು. ತಮ್ಮ ಭಾವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಕರೆದುಕೊಂಡು ಬರಲು ಸಿದ್ದೇಶ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿದ್ದ ಕಾರು ಮರಕ್ಕೆ ಗುದ್ದಿ ಅಪಘಾತ ಸಂಭವಿಸಿದೆ. ದಾನಿಹಳ್ಳಿ ಬಳಿಯ ಕಾರು ಅಪಘಾತದಲ್ಲಿ ಪೊಲೀಸ್ ಸಿದ್ದೇಶ್ ಅವರು ಸಾವನ್ನಪ್ಪಿದ್ದಾರೆ. ದಾವಣಗೆರೆ DAR ಸಿದ್ದೇಶ್ ಸಾವಿಗೆ ಪೊಲೀಸ್ ಇಲಾಖೆ ಮತ್ತು ಎಸ್ಪಿ ಉಮಾ ಪ್ರಶಾಂತ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!