Thursday, June 18, 2026
spot_imgspot_img
spot_imgspot_img

ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿ; ಆರೋಪಿ ಅರೆಸ್ಟ್..!

- Advertisement -
- Advertisement -

ಬೆಂಗಳೂರು: ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿಯಾಗಿದ್ದ ಆರೋಪಿಯನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹಾದೇವ್ ಸ್ವಾಮಿ ಅಲಿಯಾಸ್ ರಾಮಚಾರಿ ಎಂದು ಗುರುತಿಸಲಾಗಿದೆ.

ಮಾ.3ರ ರಾತ್ರಿ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರೋಡ್‌ನಲ್ಲಿ ಮಾಗಡಿ ರೋಡ್ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಇದೇ ಸಮಯದಲ್ಲಿ ಟಾಟಾ ಅಲ್ಟ್ರೋಜ್ ಕಾರಿನಲ್ಲಿ ಆರೋಪಿ ಬರುತ್ತಿದ್ದ. ಈ ವೇಳೆ ಪೊಲೀಸ್ ಸಿಬ್ಬಂದಿ ತಪಾಸಣೆಗಾಗಿ ವಾಹನವನ್ನು ಬದಿಗೆ ಹಾಕುವಂತೆ ಸನ್ನೆ ಮಾಡಿದ್ದರು. ಆಗ ಕಾರು ನಿಲ್ಲಿಸದೇ, ಪೊಲೀಸ್ ಸಿಬ್ಬಂದಿ ಹಾಗೂ ಪೊಲೀಸರ ಗ್ಲಾಮರ್ ಬೈಕ್‌ಗೆ ಗುದ್ದಿ, ಕಾರು ಚಾಲಕ ಪರಾರಿಯಾಗಿದ್ದ. ಪರಿಣಾಮ ಪೊಲೀಸ್ ಸಿಬ್ಬಂದಿ ಹೆಚ್.ಸಿ ಧರೆಪ್ಪ ಹಾಗೂ ಪಿಸಿ ಕಾರ್ತಿಕ್ ಗಾಯಗೊಂಡಿದ್ದರು.

ಘಟನೆ ಸಂಬಂಧ ಪೊಲೀಸ್ ಸಿಬ್ಬಂದಿ ಮಾಗಡಿ ರೋಡ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜೊತೆಗೆ ಟಾಟಾ ಅಲ್ಟ್ರೋಜ್ ಕಾರನ್ನು ಜಪ್ತಿ ಮಾಡಿದ್ದಾರೆ.

- Advertisement -

Related news

error: Content is protected !!