Sunday, June 29, 2025
spot_imgspot_img
spot_imgspot_img

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್​ಐಆರ್ ದಾಖಲು

- Advertisement -
- Advertisement -

ಬೆಂಗಳೂರು: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆಗೆ ಯತ್ನ ಎಂಬಂತೆ ಮುನಿರತ್ನ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಏತನ್ಮಧ್ಯೆ, ಮೊಟ್ಟೆ ಎಸೆದವರು ಎಂಬ ಆರೋಪ ಹೊತ್ತವರಿಂದಲೂ ಪ್ರತಿದೂರು ದಾಖಲು ಮಾಡಲಾಗಿದೆ. ತಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ನೀಡಿದ ಪ್ರತಿದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ವಿಶ್ವನಾಥ, ಕೃಷ್ಣಮೂರ್ತಿ, ಚಂದ್ರು ಎಂಬುವವರು ಮೊಟ್ಟೆ ಎಸೆದಿದ್ದಾರೆಂಬ ಆರೋಪ ಎದುರಿಸುತ್ತಿದ್ದು, ಇವರನ್ನು ಘಟನಾ ಸ್ಥಳದಲ್ಲೇ ಬುಧವಾರ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!