Sunday, June 29, 2025
spot_imgspot_img
spot_imgspot_img

ಜಾತಿ ಗಣತಿ ವರದಿ: ಏ. 17ಕ್ಕೆ ಚರ್ಚಿಸಲು ಸಚಿವ ಸಂಪುಟ ವಿಶೇಷ ಸಭೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಜಾರಿ ಸಾಧ್ಯತೆ ಬಗ್ಗೆ ಚರ್ಚಿಸಲಾಗಿದ್ದು, ಅಂತಿಮವಾಗಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಯಿತು.

ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಲಕೋಟೆ ಓಪನ್ ಮಾಡಲಾಯಿತು. ಸಚಿವರ ಕೈಗೆ ಜಾತಿ ಗಣತಿ ದತ್ತಾಂಶ ನೀಡಿದ ಬಳಿಕ ಆ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಆಲಿಸಿದ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬರಲಾಯಿತು.

ಜನ ಗಣತಿ ಸಮೀಕ್ಷಾ ವರದಿಯನ್ನು 2024ರ ಫೆಬ್ರವರಿಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದಾದ ನಂತರ ಜಾತಿ ಗಣತಿ ವರದಿ ಸೋರಿಕೆಯಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು.

- Advertisement -

Related news

error: Content is protected !!