Sunday, May 5, 2024
spot_imgspot_img
spot_imgspot_img

ದನಗಳಿಗೆ ಗುಂಡಿಕ್ಕಿ ಹತ್ಯೆ – ನಾಲ್ಕು ಸಾವು, 15 ದನಗಳು ಗಂಭೀರ

- Advertisement -G L Acharya panikkar
- Advertisement -

ತನ್ನ ಜಾಗಕ್ಕೆ ಪ್ರವೇಶಿಸಿದ ಒಂದೇ ಕಾರಣಕ್ಕೆ 20ಕ್ಕೂ ಹೆಚ್ಚು ಜಾನುವಾರುಗಳಿಗೆ ಗುಂಡಿಕ್ಕಿದ ಪರಿಣಾಮ ನಾಲ್ಕು ದನಗಳು ಸತ್ತು 15 ದನಗಳು ಗಂಭೀರ ಗಾಯಗೊಂಡ ಘಟನೆ ಕೊಲ್ಲೂರು ಸಮೀಪ ಬೆಳ್ಳಾಲ ಗ್ರಾಮದ ಅಂಗಡಿ ಜೆಡ್ಡು ಎಂಬಲ್ಲಿ ನಡೆದಿದೆ.

ಸೆಪ್ಟಂಬರ್ 23ರಂದು ಸ್ಥಳೀಯ ನಿವಾಸಿ ಗುಲಾಬಿ ಎಂಬುವರಿಗೆ ಸೇರಿದ ದನವೊಂದನ್ನು ಮೇಯಲು ಬಿಟ್ಟಿದ್ದು ಅದು ನರಸಿಂಹ ಎಂಬಾತನ ಗದ್ದೆಗೆ ಹೋಗಿದ್ದು, ಇದರಿಂದ ಆಕ್ರೋಶಿತಗೊಂಡ ನರಸಿಂಹ ತನ್ನ ನಾಡಕೋವಿಯಿಂದ ಗುಂಡಿಕ್ಕಿ ದನವನ್ನು ಸಾಯಿಸಿದ್ದಾನೆ. ಗುಂಡೇಟಿಗೆ ದನವು ಗದ್ದೆಯಲ್ಲಿಯೇ ಸತ್ತು ಬಿದ್ದಿದೆ.

ಇದನ್ನು ಗಮನಿಸಿ ವಿಚಾರಿಸಲು ಹೋದಾಗ ಆರೋಪಿ ನರಸಿಂಹ ಗುಲಾಬಿ ಹಾಗೂ ಅವರ ಮನೆಯವರಿಗೆ ಕೋವಿಯಲ್ಲಿ ಗುರಿಯಿಟ್ಟು, ಈಗಾಗಲೇ 20ಕ್ಕೂ ಹೆಚ್ಚು ದನಗಳಿಗೆ ಗುಂಡಿಕ್ಕಿದ್ದೇನೆ. ಅದರಲ್ಲಿ ನಾಲ್ಕು ಸತ್ತಿವೆ. ಇನ್ನಳಿದವು ಸಾಯುತ್ತವೆ. ಜಾಗ್ರತೆ ಮಾಡದಿದ್ದಲ್ಲಿ ದನಗಳಿಗಾದ ಗತಿ ನಿಮಗೂ ಬರುತ್ತದೆ ಎಂದು ಜೀವ ಬೆದರಿಕೆ ಹಾಕಿರುವುದಾಗಿ ಗುಲಾಬಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!