- Advertisement -
- Advertisement -
ನವಭಾರತದ ಪ್ರಜಾಪ್ರಭುತ್ವ ಬದ್ಧತೆಯ ಸಂಕೇತ: ಪ್ರಧಾನಿ ಮೋದಿ





ಕೇಂದ್ರ ಸರ್ಕಾರದಿಂದ ನಾರಿ ಶಕ್ತಿಯರಿಗಾಗಿ ಹೊಸ ಯೋಜನೆ ಜಾರಿ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ನಾರಿ ಶಕ್ತಿ ವಂದನ್ ಅಧಿನಿಯಮದಿಂದ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲು ದೊರೆಯಲಿದ್ದು, ದೇಶವನ್ನು ಮುನ್ನಡೆಸುವ ಹಾದಿಯಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ನಾರಿ ಶಕ್ತಿ ವಂದನ್ ಅಧಿನಿಯಮ್ ಸಾಮಾನ್ಯ ಕಾನೂನಲ್ಲ. ಇದು ನವ ಭಾರತದ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆಯಾಗಿದೆ. ಇದು ಮಹಿಳಾ ನೇತೃತ್ವದ ಅಭಿವೃದ್ಧಿಯ ನಮ್ಮ ಭರವಸೆಗೆ ಸಾಕ್ಷಿಯಾಗಿದೆ, ಕೆಲವು ನಿರ್ಧಾರಗಳು ದೇಶದ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿವೆ ಮತ್ತು ಅಂತಹ ಒಂದು ನಿರ್ಧಾರಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
- Advertisement -