

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಲ್ಲದೇ, ಬಾಂಗ್ಲಾದೇಶ ಪ್ರಧಾನಿಯಂತೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ Z ಕೆಟಗರಿ ಸೆಕ್ಯೂರಿಟಿ (Z Security) ನೀಡಿದೆ. ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿದ್ದಾರೆ. ಆಗಸ್ಟ್ 29ರವರೆಗೆ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮುಂದೂಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಷ್ಟು ದಿನಗಳ ಕಾಲ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದರು. ಆದರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಕೆಲ ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯಲ್ಲಿ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಲ್ಲದೇ, ಬಾಂಗ್ಲಾದೇಶ ಪ್ರಧಾನಿಯಂತೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಕೆಲವರು ಹೇಳಿಕೆಗಳನ್ನು ನೀಡಿದ್ದರು. ಜೊತೆಗೆ ಕೆಲ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಎಚ್ಚರಿಕೆಯನ್ನೂ ನೀಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ ಒದಗಿಸುವ ಬೆಳವಣಿಗೆ ನಡೆದಿದೆ.