ಚಾಮರಾಜನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ.ದಂಡ ವಿಧಿಸಲಾಗಿದೆ.
ಆರೋಪಿಯನ್ನು ರವಿಕುಮಾರ್(26) ಎನ್ನಲಾಗಿದೆ.
ಈ ಘಟನೆ 2018ರ ಆಗಸ್ಟ್ 15ರಂದು ನಡೆದಿತ್ತು. ಈ ಪ್ರಕರಣದ ಬಗ್ಗೆ ಮೂರು ವರ್ಷಗಳ ನಂತರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಆದೇಶ ಹೊರಡಿಸಿದೆ.
9 ವರ್ಷದ ಬಾಲಕಿಯು ವಿಕಲಚೇತನ ಹಾಗೂ ಬುದ್ಧಿಮಾಂದ್ಯ ಸಮಸ್ಯೆಯಿಂದ ಬಳಲುತ್ತಿದ್ದಳು. ಯಳಂದೂರು ತಾಲೂಕಿನ ಗ್ರಾಮವೊಂದರ ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ
ಈ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ತೆರಲು ತಪ್ಪಿದ್ದಲ್ಲಿ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಅಲ್ಲದೇ ನೊಂದ ಅಪ್ರಾಪ್ತ ಬಾಲಕಿಯ ಪುನಶ್ವೇತನಕ್ಕಾಗಿ ಉಚಿತ ವೈದ್ಯಕೀಯ ಚಿಕಿತ್ಸೆ ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸುವಂತೆ ನಿರ್ದೇಶಿಸಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪರಿಹಾರವಾಗಿ 2 ಲಕ್ಷದ 50 ಸಾವಿರ ರೂ. ನೀಡುವಂತೆ ನ್ಯಾಯಾಲಯವು ಆದೇಶಿಸಿದೆ.