Thursday, April 25, 2024
spot_imgspot_img
spot_imgspot_img

ವಿಟ್ಲ: ಚಂದಪ್ಪಾಡಿ ಮನೆಯಲ್ಲಿ ಶ್ರೀ ಕಲ್ಕುಡ-ಕಲ್ಲುರ್ಟಿ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಾಶಾಭಿಷೇಕ ಹಾಗೂ ನೇಮೋತ್ಸವ

- Advertisement -G L Acharya panikkar
- Advertisement -

ವಿಟ್ಲ: ಚಂದಪ್ಪಾಡಿ ಮನೆಯಲ್ಲಿ ಶ್ರೀ ಕಲ್ಕುಡ-ಕಲ್ಲುರ್ಟಿ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಾಶಾಭಿಷೇಕ ಹಾಗೂ ನೇಮೋತ್ಸವವು ವಿಜೃಂಭಣೆಯಿಂದ ನೆರವೇರಿತು.

ಬೆಳಿಗ್ಗೆ ಗಣಪತಿ ಹೋಮ, ಕಲಶ ಪ್ರತಿಷ್ಠೆ ನಡೆದು ಬಳಿಕ ವೇದಮೂರ್ತಿ ಶ್ರೀ ಉದಯೇಶ ಕೆದಿಲಾಯರವರ ನೇತೃತ್ವದಲ್ಲಿ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಾಶಾಭಿಷೇಕ ನಡೆಯಿತು. ಸಂಜೆ ಕಲ್ಲಗದ್ದೆ ಗುತ್ತುವಿನಿಂದ ಚಂದಪ್ಪಾಡಿ ಚಾವಡಿಗೆ ಭಂಡಾರ ಆಗಮಿಸಿ, ಬಳಿಕ ಅನ್ನಸಂತರ್ಪಣೆ ನಡೆಯಿತು.

ನಂತರ ದೈವಗಳ ನೇಮೋತ್ಸವವು ನಡೆಯಿತು. ವಿಟ್ಲ ಅರಮನೆ ಮನೆತನದವರು, ಗುತ್ತು ಮನೆತನದವರು, ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!