Saturday, June 28, 2025
spot_imgspot_img
spot_imgspot_img

ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಭರ್ಜರಿ ಗೆಲುವು; ನರೇಂದ್ರ ಮೋದಿಯಿಂದ ಕರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ರಾಜ್ಯದಲ್ಲಿ ಅದ್ಬುತ ಗೆಲುವು ಸಾಧಿಸಿದಕ್ಕಾಗಿ ಅಭಿನಂದನೆ ಕೋರಿದ್ದಾರೆ. ಹಾಗೆ ಎನ್ ಡಿಎ ಮೈತ್ರಿಕೂಟದ ಭಾಗವಾದ ಟಿಡಿಪಿಯು ಹೊಸತಾಗಿ ಸರಕಾರ ರಚಿಸಲು ಎನ್ ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡುವಂತೆ ಕೋರಿದ್ದಾರೆ.

ಈ ಬಾರಿ ಆಂಧ್ರದಲ್ಲಿ ಟಿಡಿಪಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ವಿಧಾನಸಭೆಯಲ್ಲಿ ಏಕಾಂಗಿಯಾಗಿ ಸರ್ಕಾರ ರಚಿಸಲಿದೆ. ಎನ್ಡಿಎ ಮೈತ್ರಿಕೂಟ ಪಕ್ಷವಾದ ಟಿಡಿಪಿ 133, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 21 ಹಾಗೂ ಬಿಜೆಪಿ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಕಳೆದ ಬಾರಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿದ್ದ ಜಗನ್ ರೆಡ್ಡಿ ನೇತೃತ್ವದ YSRCP ಪಕ್ಷ ಕೇವಲ 15 ಸ್ಥಾನಗಳಿಗೆ ಕುಸಿದಿದೆ. ಈ ಮಧ್ಯೆ ಲೋಕಸಭೆ ಚುನಾವಣೆಯಲ್ಲಿ ಟಿಡಿಪಿ 16 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 240 ಸ್ಥಾನಗಳನ್ನು ಪಡೆದುಕೊಂಡಿರುವ ಬಿಜೆಪಿ ನೇತೃತ್ವದ ಎನ್ಡಿಎಗೆ 295 ಸ್ಥಾನಗಳು ಬಂದಿದೆ. ಹೀಗಾಗಿ ಸರ್ಕಾರ ರಚಿಸಬೇಕಾದರೆ ಮಿತ್ರಪಕ್ಷಗಳ ಬೆಂಬಲ ಮುಖ್ಯವಾಗುತ್ತದೆ.

ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಿತ್ರಪಕ್ಷಗಳ ನಾಯಕರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಇದೇ ವೇಳೆ ಚಂದ್ರಬಾಬು ನಾಯ್ಡುಗೆ ಎನ್ ಡಿಎ ಮೈತ್ರಿಕೂಟದ ಸಂಚಾಲಕನ ಹುದ್ದೆಯನ್ನು ಆಫರ್ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
. ರಾಜ್ಯದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷವನ್ನು ಒಳಗೊಂಡಿರುವ ಎನ್‌ಡಿಎ 175 ಸದಸ್ಯ ರಾಜ್ಯ ವಿಧಾನಸಭೆಯ 157 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವಿನತ್ತ ಸಾಗುತ್ತಿದೆ.

ಚಂದ್ರಬಾಬು ನಾಯ್ಡು ಅವರು ಆರಂಭದಿಂದಲೂ ಕಾಂಗ್ರೆಸ್ ಪಕ್ಷವನ್ನು ವಿರೋಧಿಸುತ್ತಲೇ ರಾಜಕೀಯ ಮಾಡಿಕೊಂಡು ಬಂದವರು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ನಾಯ್ಡು ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

- Advertisement -

Related news

error: Content is protected !!