Friday, June 27, 2025
spot_imgspot_img
spot_imgspot_img

ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

- Advertisement -
- Advertisement -

ಚನ್ನಪಟ್ಟಣ: ಚನ್ನಪಟ್ಟಣ ರಾಜಕೀಯ ಕಣ ರಂಗೇರುತ್ತಿದ್ದು ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಗುರುವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದರು. ಇದೀಗ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕಿಳಿದಿದ್ದಾರೆ. ಇದು ಅವರ ಮೂರನೇ ಬಾರಿಯ ಅದೃಷ್ಟ ಪರೀಕ್ಷೆಯಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ನಿಖಿಲ್‌ಗೆ ಹೆಚ್‌ಡಿಕೆ, ಆರ್.ಅಶೋಕ್, ಸದಾನಂದಗೌಡ, ಬಿ.ವೈ.ರಾಘವೇಂದ್ರ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

- Advertisement -

Related news

error: Content is protected !!