Wednesday, May 15, 2024
spot_imgspot_img
spot_imgspot_img

ಚೆಕ್ ಬೌನ್ಸ್ ಪ್ರಕರಣ; ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಬಂಧನ, ಜಾಮೀನಿನ ಮೇಲೆ ಬಿಡುಗಡೆ

- Advertisement -G L Acharya panikkar
- Advertisement -

ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಅವರನ್ನು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ. ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಚೆಕ್​ ಬೌನ್ಸ್​ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಜಡ್ಜ್​ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಹಾಗಾಗಿ ನೀನಾಸಂ ಅಶ್ವತ್ಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ.

ನಟ ನೀನಾಸಂ ಅಶ್ವತ್ಥ್​ ಅವರು ಹಾಸನದ ರೋಹಿತ್​ ಎಂಬುವವರಿಂದ ಹಸು ಖರೀದಿ ಮಾಡಿದ್ದರು. ಆಗ 1.5 ಲಕ್ಷ ರೂಪಾಯಿ ಮೌಲ್ಯದ ಚೆಕ್​ ನೀಡಿದ್ದರು. ಆದರೆ ಹಣ ಪಡೆಯಲು ರೋಹಿತ್​ ಅವರು ಬ್ಯಾಂಕ್​ಗೆ ಹೋದಾಗ ಚೆಕ್​ಬೌನ್ಸ್​ ಆಗಿರುವುದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಹಾಸನದ ಜೆಎಮ್‌ಎಫ್‌ಸಿ‌ ಕೋರ್ಟ್‌ನಲ್ಲಿ‌ ರೋಹಿತ್​ ಅವರು ಕೇಸ್ ಹಾಕಿದ್ದರು. ಈ ಪ್ರಕರಣದಲ್ಲಿ ನೀನಾಸಂ ಅಶ್ವತ್ಥ್​ ಅವರು ಕೋರ್ಟ್​ಗೆ ಹಾಜರಾಗಿರಲಿಲ್ಲ. ಐದನೇ ಬಾರಿಗೆ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿತ್ತು.

ನ್ಯಾಯಾಲದ ಮುಂದೆ ಹಾಜರುಪಡಿಸಿದಾಗ ನೀನಾಸಂ ಅಶ್ವತ್ಥ್​ ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇಕಡ 25ರಷ್ಟು ಹಣವನ್ನು ನೀಡಿದ್ದಾರೆ. ಇನ್ನುಳಿದ ಮೊತ್ತ ಪಾವತಿ ಮಾಡಲು ಜಡ್ಜ್​ ಬಳಿ ಸಮಯಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ನೀನಾಸಂ ಅಶ್ವತ್ಥ್ ಅವರಿಗೆ ಜಾಮೀನು ನೀಡಲಾಗಿದೆ. ಅವರನ್ನು ಬಿಡುಗಡೆ ಮಾಡಲಾಗಿದೆ.

- Advertisement -

Related news

error: Content is protected !!