- Advertisement -
- Advertisement -
ಚಿಕ್ಕಬಳ್ಳಾಪುರ : ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ಲಾಡ್ಜ್ವೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದ 19 ಮಂದಿಯನ್ನ ಚಿಕ್ಕಬಳ್ಳಾಪುರ ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 1,56,750 ರೂಪಾಯಿ ನಗದು ಹಾಗೂ 4 ಕಾರು, 2 ಬೈಕ್ಗಳನ್ನ ವಶಪಡಿಸಿಕೊಂಡಿದ್ದಾರೆ. ಈ ಜೂಜಾಟದಲ್ಲಿ ಶಿಕ್ಷಕನೂ ಸಹ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಈ ಸಂಬಂಧ ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನ ಗುಡಿಬಂಡೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜೂಜುಕೋರರ ಕೋವಿಡ್ ರಿಪೋರ್ಟ್ ಬಾರದ ಹಿನ್ನೆಲೆ ವರದಿ ಬರುವವರೆಗೆ ಪೊಲೀಸರ ವಶದಲ್ಲಿಯೇ ಇರಿಸಿಕೊಳ್ಳುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.
- Advertisement -