Tuesday, July 21, 2026
spot_imgspot_img
spot_imgspot_img

ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

- Advertisement -
- Advertisement -

ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ.

ಸೌಜನ್ಯ ಪೂಜಾರಿ(22) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಯುವತಿಗೆ ಅಪ್ಪ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಮಗಳು ಸೌಜನ್ಯ ಸಾಂಬಾರ್ ಮಾಡಿರಲಿಲ್ಲ. ಸಾಂಬಾರ್ ಏಕೆ ಮಾಡಿಲ್ಲ ಎಂದು ಅಪ್ಪ ಬೈದಿದ್ದು, ಮಗಳಿಗೆ ಬೈದ ಅಪ್ಪ ಸಾಂಬಾರ್ ತರಲು ಪಕ್ಕದ ಮನೆಗೆ ಹೋಗಿದ್ದರು. ಅಪ್ಪ ಬರುವಷ್ಟರಲ್ಲಿ ಸೌಜನ್ಯ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನಾ ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!