- Advertisement -
- Advertisement -




ಚಿಕ್ಕಮಗಳೂರು: ಪಶ್ಚಿಮಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರು ಓಡಾಟದ ಶಂಕೆ ವ್ಯಕ್ತವಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಓಡಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಮಾಹಿತಿಯ ಆಧಾರದ ಮೇಲೆ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಂಡಿದೆ.
ಕಳಸ, ಶೃಂಗೇರಿ, ತಾಲೂಕಿನ ಘಟ್ಟ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಗೊಂಡಿದೆ. ಹಲವು ವರ್ಷಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಓಡಾಟದ ಸದ್ದು ಕೇಳಿದ್ದು, ಈ ಭಾಗಗಳಲ್ಲಿ ಆತಂಕ ಹೆಚ್ಚಿಸಿದೆ.
- Advertisement -








