- Advertisement -
- Advertisement -
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮನೆಗೆ ಬೆಂಕಿ ಬಿದ್ದು ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ಮೃತ ದುರ್ದೈವಿಯನ್ನು ಸೋಮಶೇಖರ್ ಶಿವಾನಂದ ಪಾಟೀಲ್(32) ಎಂದು ಗುರುತಿಸಲಾಗಿದೆ. ಇವರು ಶಿರಗುಪ್ಪಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಇವರೊಬ್ಬರೇ ಮಲಗಿದ್ದು, ಈ ವೇಳೆ ಎಸಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಮನೆಗೆ ಬೆಂಕಿ ಆವರಿಸಿ, ಸೋಮಶೇಖರ್ ಸಜೀವ ದಹನವಾಗಿದ್ದಾರೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



- Advertisement -








