




ವೀರಕಂಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಬೊನ್ಯಕುಕ್ಕು ಅಂಗನವಾಡಿ ಕೇಂದ್ರ ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬೊನ್ಯಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ಕಮರುನ್ನೀಸಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಂಟ್ವಾಳ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ ಮಾತನಾಡಿ ಮಕ್ಕಳ ಕಾಳಜಿಯ ಜೊತೆ ಪೋಷಕರ ಜವಾಬ್ದಾರಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಮಕ್ಕಳ ಚಲನ ವಲನಗಳನ್ನು ಪ್ರತಿದಿನ ಗಮನಿಸುತ್ತಾ ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಜವಾಬ್ದಾರಿ ಬಹಳ ಇದೆ ಎಂದು ಹೇಳಿದರು
ಮಕ್ಕಳ ದಿನಾಚರಣೆ ಪ್ರಯುಕ್ತ ಮಾಡಿದ ವಿವಿಧ ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗೊಳಿಮಾರ್, ಪಂಚಾಯತ್ ಸದಸ್ಯರಾದ ಉಮಾವತಿ, ,ಸಂಜೀವಿನಿ ಒಕ್ಕೂಟ ಎಮ್ ಬಿ ಕೆ ಮಲ್ಲಿಕಾ,ಎಲ್ ಸಿ ಆರ್ ಪಿ ಜಯಂತಿ, , ಆಶಾಕಾರ್ಯಕರ್ತೆ ಮೋಹಿನಿ, ಕೃಷಿ ಸಖಿ ನಮಿತಾ, ಚೇತನ ಗೋಲಿಮಾರು, ಚಿನ್ನಾ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.
ಬಾಲ ವಿಕಾಸ ಸಮಿತಿ ಸದಸ್ಯರು, ಮಕ್ಕಳ ಪೋಷಕರು, ಸೂರ್ಯ ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಕೂಡಪದವು ಶಾಲಾ ಗೌರವ ಶಿಕ್ಷಕಿ ಶ್ವೇತ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ವಂದಿಸಿದರು. ಅಂಗನವಾಡಿ ಸಹಾಯಕಿ ಸವಿತಾ ಕೆ ಸಹಕರಿಸಿದರು.








