Saturday, June 28, 2025
spot_imgspot_img
spot_imgspot_img

ಮಂಗಳೂರು: ನದಿಯಲ್ಲಿ ಮುಳುಗಿ ಸಿಟಿ ಬಸ್ ಕಂಡೆಕ್ಟರ್ ಮೃತ್ಯು

- Advertisement -
- Advertisement -

ಮಂಗಳೂರು: ರೈಲ್ವೆ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮರವೂರು ಎಂಬಲ್ಲಿ ಇಂದು ಸಂಜೆ ನಡೆದಿದೆ.

ಮೃತರನ್ನು ಮೂಲತಃ ಬಜ್ಪೆ ನಿವಾಸಿ, ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್ (30) ಎಂದು ಗುರುತಿಸಲಾಗಿದೆ. ಇವರು ಸಿಟಿ ಬಸ್ ನಲ್ಲಿ ಕಂಡೆಕ್ಟರ್ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಶಾಕಿ‌ರ್ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೆಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಶಾಕಿ‌ರ್ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಯ ಸಹಕಾರ ಪಡೆದು ಮೃತದೇಹವನ್ನು ನದಿಯಿಂದ ಮೇಲೆತ್ತಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಗಾಗಿ ಎನೆಪೊಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!