Saturday, June 28, 2025
spot_imgspot_img
spot_imgspot_img

ಸಿವಿಲ್ ಗುತ್ತಿಗೆದಾರನನ್ನು ಹನಿಟ್ರ್ಯಾಪ್ ಮಾಡಿ ನಗದು- ಚಿನ್ನಾಭರಣ ಸುಲಿಗೆ; ಇಬ್ಬರು ಆರೋಪಿಗಳ ಬಂಧನ..!

- Advertisement -
- Advertisement -

ಬೆಂಗಳೂರು: ಸಿವಿಲ್ ಗುತ್ತಿಗೆದಾರನನ್ನು ಹನಿಟ್ರ್ಯಾಪ್ ಮಾಡಿ ನಗದು ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ್ದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಂಧಿತರನ್ನು ಮಾಗಡಿ ಮುಖ್ಯರಸ್ತೆ ತುಂಗಾನಗರ ನಿವಾಸಿ ನಯನಾ (26), ಆಕೆಯ ಸ್ನೇಹಿತ ಮೋಹನ್ (30) ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆ ನಯನಾಳ ಸಹಚರರಾದ ಅಜಯ್, ಸಂತೋಷ್, ಜಯರಾಜ್‌ನನ್ನು ಬಂಧಿಸಲಾಗಿತ್ತು.

ರಂಗನಾಥ ಸಿವಿಲ್ ಗುತ್ತಿಗೆದಾರರಾಗಿದ್ದು, 6 ತಿಂಗಳ ಹಿಂದೆ ಶಿವು ಎಂಬ ಸ್ನೇಹಿತನ ಮೂಲಕ ನಯನಾಳ ಪರಿಚಯವಾಗಿದೆ. ಈ ನಡುವೆ ರಂಗನಾಥ ಕಾರ್ಯ ನಿಮಿತ್ತ ಡಿ.9ರಂದು ಮಾಗಡಿ ರಸ್ತೆಯ ತುಂಗಾನಗರದ ಮಾರ್ಗವಾಗಿ ನೆಲಗದರನಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ತುಂಗಾನಗರ ಕ್ರಾಸ್‌ನಲ್ಲಿ ಎದುರಾದ ನಯನಾ, ರಂಗನಾಥ ಅವರನ್ನು ಮಾತನಾಡಿಸಿದ್ದಳು. ಆಗ ಕೂಡಲೇ ಇಲ್ಲೇ ಹತ್ತಿರದಲ್ಲೇ ನಮ್ಮ ಮನೆ ಇದೆ. ಟೀ ಕುಡಿದು ಹೋಗಿ ಎಂದು ಕರೆದಿದ್ದಾಳೆ. ಅದಕ್ಕೆ ಒಪ್ಪಿದ ರಂಗನಾಥ ಆಕೆಯ ಮನೆಗೆ ಹೋಗಿದ್ದಾರೆ. ಇಬ್ಬರು ಕುಳಿತು ಮಾತನಾಡುವಾಗ ಏಕಾಏಕಿ ಆರೋಪಿಗಳಾದ ಸಂತೋಷ್, ಅಜಯ್, ಜಯರಾಜ್ ಮನೆಗೆ ನುಗ್ಗಿದ್ದಾರೆ.

ನಾವು ಕ್ರೈಂ ಪೊಲೀಸರು ಎಂದು ಪರಿಚಯಿಸಿಕೊಂಡಿದ್ದರು. ನೀವು ಮನೆಯಲ್ಲಿ ವ್ಯಭಿಚಾರ ಮಾಡುತ್ತಿದ್ದೀರಿ. ಹೊರಗಡೆ ಜೀಪಿನಲ್ಲಿ ಮೇಡಂ ಇದ್ದಾರೆ ಎಂದು ರಂಗನಾಥ್ ಮೇಲೆ ಹಲ್ಲೆ ಮಾಡಿ, ಬಳಿಕ ರಂಗನಾಥ್‌ನ ಬಟ್ಟೆ ಬಚ್ಚಿಸಿ ಮೊಬೈಲ್‌ನಲ್ಲಿ ಫೋಟೋ ತೆಗೆದು ವಿಡಿಯೋ ಸೆರೆ ಹಿಡಿದಿದ್ದಾರೆ. 2 ಲಕ್ಷ ರೂ. ಕೊಟ್ಟರೆ ಇಲ್ಲೇ ಬಿಟ್ಟು ಹೋಗುತ್ತೇವೆ. ಇಲ್ಲವಾದರೆ, ನಿಮ್ಮಿಬರ ನಡುವೆ ಅಕ್ರಮ ಸಂಬಂಧ ಇದೆ ಎಂದು ನಿನ್ನ ಹೆಂಡತಿಗೆ ತಿಳಿಸುತ್ತೇವೆ ಎಂದು ಬೆದರಿಸಿದ್ದಾಳೆ. ಅದರಿಂದ ಹೆದರಿದ ರಂಗನಾಥ್‌ರಿಂದ 29 ಸಾವಿರ ರೂ., 5 ಲಕ್ಷ ಮೌಲ್ಯದ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದರು.

- Advertisement -

Related news

error: Content is protected !!