Sunday, June 29, 2025
spot_imgspot_img
spot_imgspot_img

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ; ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ

- Advertisement -
- Advertisement -

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕೋಮುಗಲಭೆ ಸಂಭವಿಸಿದ ಹಿನ್ನೆಲೆ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ.

ಕೆಲವು ಯುವಕರು ಗಣಪತಿ ವಿಗ್ರಹ ವಿಸರ್ಜನಕ್ಕೆ ಮೆರವಣಿಗೆ ನಡೆಸುತ್ತಿದ್ದರು ಮತ್ತು ಅವರು ಪಟ್ಟಣದ ದರ್ಗಾ ಬಳಿ ಹಾದು ಹೋಗುತ್ತಿದ್ದಾಗ, ಕೆಲವು ಕಿಡಿಗೇಡಿಗಳು ಅವರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು, ಇದು ನಂತರ ಘರ್ಷಣೆಗೆ ಕಾರಣವಾಯಿತು. ಈ ಪ್ರದೇಶದಲ್ಲಿ ಪೊಲೀಸರು ನಿರ್ಬಂಧ ಹೇರಿದ್ದು, ಕಟ್ಟೆಚ್ಚರ ವಹಿಸಿದ್ದಾರೆ.

- Advertisement -

Related news

error: Content is protected !!