Sunday, June 29, 2025
spot_imgspot_img
spot_imgspot_img

ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ; 9 ಕಾರ್ಮಿಕರು ನಾಪತ್ತೆ..!

- Advertisement -
- Advertisement -

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು ಹಠಾತ್ ಪ್ರವಾಹ ಉಂಟಾದ ಪರಿಣಾಮ ಉತ್ತರಕಾಶಿ ಬಳಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.

ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದೆ. ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಇನ್ನು ಭಾರೀ ಮೇಘಸ್ಫೋಟದಿಂದ ಚಾರ್‌ಧಾಮ್ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಸ್ಥಗಿತಗೊಂಡಿದೆ. ಭಾರೀ ಮಳೆಯಿಂದಾಗಿ ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ರುದ್ರಪ್ರಯಾಗ ಜಿಲ್ಲೆಯ ಸೋನ್‌ಪ್ರಯಾಗ್-ಮುಂಕಟಿಯಾ ರಸ್ತೆ ಬಂದ್ ಆಗಿದೆ. ಅಲ್ಲದೇ ಕೇದಾರನಾಥಕ್ಕೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಮಾರ್ಗ ಬಂದ್ ಮಾಡಲಾಗಿದೆ.

- Advertisement -

Related news

error: Content is protected !!