Sunday, June 29, 2025
spot_imgspot_img
spot_imgspot_img

ಸುಳ್ಯ: ಪಾದಚಾರಿಗೆ ಕಾರು ಢಿಕ್ಕಿ; ಸ್ಥಳದಲ್ಲೇ ಮೃತ್ಯು..!

- Advertisement -
- Advertisement -

ಸುಳ್ಯ: ಪಾದಚಾರಿಗೆ ಕಾರೊಂದು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂದು ಗುರುತಿಸಲಾಗಿದೆ.

ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಪ್ರಗತಿ ಅಂಬ್ಯುಲೆನ್ಸ್ ಚಾಲಕ ಅಚ್ಚು ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಗೋಪಾಲ ಅವರು ಜಟಿಪಳ್ಳ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಮೇಸ್ತ್ರಿ ವೃತಿಯನ್ನು ಮಾಡುತ್ತಿದ್ದರು.

- Advertisement -

Related news

error: Content is protected !!