- Advertisement -
- Advertisement -
ಜೆಡಿಎಸ್ -ಬಿಜೆಪಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.
ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆ” ಎಂದು ತಿಳಿಸಿದರು.
ಸಿಎಂ ಇಬ್ರಾಹಿಂ ರವರು ತೆರವಾದ ಸ್ಥಾನಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
- Advertisement -