

ಬೆಂಗಳೂರು: ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ, ಸೋಂಕು ಹೆಚ್ಚಾದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತಲೂ, ಈ ಹಿಂದೆಯ ಅನುಭವಗಳ ಆಧಾರದ ಮೇಲೆ ಈÃಗಿನಿಂದಲೇ ಕ್ರಮಕೈಗೊಳ್ಳುತ್ತೇವೆ ಎಂದು ಸಣ್ಣ ಸುಳಿವು ನೀಡಿದ್ದಾರೆ.
ಜನರಿಗೆ ತೊಂದರೆ ಕೊಡುವ ಉದ್ದೇಶ ನಮ್ಮದಲ್ಲ. ಇದರ ಬಗ್ಗೆ ಸಂಜೆ ತಜ್ಞರ ಸಭೆ ನಡೆಸಿ ವೈಜ್ಞಾನಿಕವಾಗಿ ಚಿಂತನೆ ನಡೆಸಿ ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸಿಎಂ ತಳಿಸಿದ್ದಾರೆ. ಕೊವಿಡ್ ನಿಯಂತ್ರಣಕ್ಕೆ ಹಲವು ಬದಲಾವಣೆಗಳನ್ನು ತರಲು ಅವಕಾಶವಿದೆ. ಮೂರನೇ ಅಲೆ ಆತಂಕ ಇರುವುದರಿಂದಾಗಿ ಈಗಲೇ ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ ಎಂದು ಅವರು ಹೇಳಿದರು. ಹೀಗಾಗಿ ಟಫ್ ರೂಲ್ಸ್ ಗಳು ಜಾರಿಯಾಗುತ್ತಾ ಅಥವಾ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಗಳು ಇವೆ.
ರಾಜ್ಯ ಸರ್ಕಾರದ ಮುಂದಿನ ತೀರ್ಮಾನ ಇಂದು ಸಂಜೆ ಹೊರಬೀಳಲಿದ್ದು, ಲಾಕ್ ಡೌನ್ ಆಗುತ್ತಾ, ಟಫ್ ರೂಲ್ಸ್ ಗಳು ಜಾರಿಯಾಗುತ್ತಾ ಅಥವಾ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮಾತ್ರವೇ ಜಾರಿಯಲ್ಲಿರುತ್ತಾ ಎಂಬ ಬಗ್ಗೆ ಇಂದು ಸರ್ಕಾರ ಸ್ಪಷ್ಟ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆಗಳಿವೆ.


