Friday, April 19, 2024
spot_imgspot_img
spot_imgspot_img

ಮುಖ್ಯಮಂತ್ರಿ ಬಿಎಸ್​ವೈ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ.

- Advertisement -G L Acharya panikkar
- Advertisement -

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ ಸಿಎಂ ಬಿ.ಎಸ್​​ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಎಲ್ಲರನ್ನೂ ಹೊರಗೆ ಕಳುಹಿಸಿ ಸುಮಾರು 20 ರಿಂದ 25 ನಿಮಿಷಗಳ ಕಾಲ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಳೆದ ಕೆಲವು ದಿನಗಳಿಂದ ಮಳೆಯಿಂದಾಗಿ ಹೆಚ್ಚು ಹಾನಿ ಉಂಟಾಗುತ್ತಿದೆ. ವಿಶೇಷವಾಗಿ ನಮ್ಮ ದಾಸರಹಳ್ಳಿ ಶಾಸಕ ಮಂಜುನಾಥ್ ಕ್ಷೇತ್ರದಲ್ಲಿ ಬಹಳ ಹಾನಿ ಆಗಿತ್ತು. ನಾನು ಸಿಎಂ ಆಗಿದ್ದಾಗ ಅನುದಾನ ಕೊಟ್ಟಿದ್ದೆ. ಅದು ಬಿಡುಗಡೆ ಆಗಿರಲಿಲ್ಲ. ಅದರ ಬಗ್ಗೆ ಮನವಿ ಮಾಡಲು ಬಂದಿದ್ದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮನ್ನು ರಾಜಕೀಯ ಕಾರಣಕ್ಕಾಗಿ ಭೇಟಿ ಮಾಡಿದ್ದಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದು, ಹೆಚ್ಚಿನ ನೆರವು ನೀಡಬೇಕು ಎಂದು ಕೇಳಲು ಬಂದಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಣೆ ನೀಡಿದರು.

- Advertisement -

Related news

error: Content is protected !!