ಶುಕ್ರವಾರ ರಾತ್ರಿ ಬಾಂಗ್ಲಾದೇಶದ ಬೆನಾಪೋಲ್ ರೈಲಿನ ನಾಲ್ಕು ಭೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟಿದ್ದಾರೆ. ರೈಲಿನಲ್ಲಿ ಭಾರತೀಯ ಪ್ರಜೆಗಳೂ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು ಜೆಸ್ಸೋರ್ನಿಂದ ಢಾಕಾಕ್ಕೆ ತೆರಳುತ್ತಿತ್ತು. ರೈಲು ಸಯಿದಾಬಾದ್ನ ಗೋಲಬಾಗ್ ಪ್ರದೇಶಕ್ಕೆ ತಲುಪಿದಾಗ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ತಗುಲಿದ ಬೆನಪೋಲ್ ಪ್ಯಾಸೆಂಜರ್ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸುತ್ತಿದ್ದ ವೇಳೆಯೇ ಓರ್ವ ಯುವಕ ಮೃತಪಟ್ಟಿದ್ದಾನೆ. ಬೆನಪೋಲ್ ಎಕ್ಸ್ಪ್ರೆಸ್ನಲ್ಲಿ ಕನಿಷ್ಠ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ಸೇವಾ ಅಧಿಕಾರಿ ರಕ್ಜಿಬುಲ್ ಹಸನ್ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ನಾಳೆ (ಜ.07) ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಚುನಾವಣೆಯನ್ನು ಅಲ್ಲಿನ ವಿರೋಧ ಪಕ್ಷಗಳಾದ ಬಾಂಗ್ಲದೇಶ ರಾಷ್ಟ್ರೀಯ ಪಕ್ಷ (ಬಿಎನ್ಪಿ) ಸೇರಿದಂತೆ ವಿವಿಧ ಪಕ್ಷಗಳ ವಿರೋಧಿಸಿವೆ. ಚುನಾವಣೆಯನ್ನು ಬಹಿಷ್ಕರಿಸಲು ಮತ್ತು ದೇಶದಲ್ಲಿ ಶಾಂತಿ ಕದಡಲು ವಿರೋಧ ಪಕ್ಷಗಳು ಬೆಂಕಿ ಹಚ್ಚಿವೆ ಎಂದು ಆರೋಪ ಕೇಳಿಬಂದಿದೆ.