- Advertisement -
- Advertisement -
ನಿರ್ಮಾಣ ಹಂತದ ಶಾಲಾ ಕಟ್ಟಡವೊಂದು ಕುಸಿದ ಪರಿಣಾಮ ಇಬ್ಬರು ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಇವರು ಪಶ್ಚಿಮ ಬಂಗಾಳ ಮೂಲದವರಾದ ಸಾಹಿದ್ (31) ಮತ್ತು ಮಿನಾರ್ ಬಿಸ್ವಾಸ್ ಎಂದು ಗುರುತಿಸಲಾಗಿದೆ.
ಬ್ಯಾಡರಹಳ್ಳಿಯಲ್ಲಿ ಖಾಸಗಿ ಶಾಲೆಯೊಂದು ನಿರ್ಮಾಣವಾಗುತ್ತಿದೆ. ಇದರ ಎರಡನೇ ಅಂತಸ್ತಿನ ನಿರ್ಮಾಣ ನಡೆಯುತಿದ್ದು ಇಂದು ಬೆಳಗ್ಗೆಯೇ ಕಾರ್ಮಿಕರು ಕೆಲಸ ಆರಂಭಿಸಿದ್ದರು. ಈ ವೇಳೆ ಕಟ್ಟಡದ ಸೆಂಟ್ರಿಂಗ್ ಏಕಾಏಕಿ ಕುಸಿದಿದೆ. ಅದರ ಮೇಲೆ 25ರಷ್ಟು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದವರು ಕೆಳಗುರುಳಿದ್ದಾರೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆನೇಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
- Advertisement -