


ಮೂಡಬಿದಿರೆಯ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿ ಕಾಲೇಜು ಅಧ್ಯಾಪಕನ ಕೈವಾಡವಿದೆ, ಕೂಡಲೇ ಕೆಲಸದಿಂದ ವಜಾ ಮಾಡಬೇಕೆಂದು ಕಾಲೇಜು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳ ಜೊತೆ ಈ ಸುದ್ದಿ ವೈರಲ್ ಆಗುತ್ತಿದೆ.
ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಿಎ ವಿಭಾಗದ ಶ್ರೀನಿಧಿ ಶೆಟ್ಟಿ ಎಂಬ 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಹೊಣೆ ಸಿಎ ವಿಭಾಗದ ಸಂಯೋಜಕ ಅನಂತಶಯನ ಎಂದು ಹಲವು ಕಡೆಯಿಂದ ಮಾಹಿತಿಗಳು ಬರುತ್ತಿದೆ.
ಆಳ್ವಾಸ್ ಕಾಲೇಜಿನಿಂದ ಈ ವಿಚಾರದ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ಸಿಕ್ಕಿರುವುದಿಲ್ಲ ಎಂದು ಕಾಲೇಜಿನ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಪೋಷಕರು ಬೇಸರ ಮತ್ತು ಭಯ ವ್ಯಕ್ತಪಡಿಸಿದ್ದು, ಪೋಷಕರು ಕಾಲೇಜಿನ ಶಿಕ್ಷಕರನ್ನು ಕರೆ ಮಾಡಿ ತಮ್ಮ ಮಕ್ಕಳನ್ನು ಹೇಗೆ ಕಾಲೇಜಿಗೆ ಕಳಿಸುವುದು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಇದರ ಬಗ್ಗೆ ಹಲವಾರು ಪೋಸ್ಟ್ ಗಳನ್ನು ರಚಿಸಿ ಕಾಲೇಜು ವಿದ್ಯಾರ್ಥಿಗಳು ಅನಂತಶಯನ ಇವರನ್ನು ಕೆಲಸದಿಂದ ವಜಾ ಮಾಡಬೇಕೆಂದು ಬೇಡಿಕೆಯನ್ನು ಇಟ್ಟಿದ್ದಾರೆ.