- Advertisement -
- Advertisement -
ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ವಿಜಯ ಕುಮಾರ್ ಚಂದ್ರಾಶಾ ಮೌರೇ (33) ಮೃತಪಟ್ಟವರು.
ಗಣೇಶ ನಗರದಿಂದ ಆಶ್ರಯ ಕಾಲೋನಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -