Wednesday, May 1, 2024
spot_imgspot_img
spot_imgspot_img

ಬಡ್ಡಿ ಮಾಫಿಯಾಗೆ ಕಮಿಷನರ್ ಎನ್. ಶಶಿಕುಮಾರ್ ಖಡಕ್ ವಾರ್ನಿಂಗ್

- Advertisement -G L Acharya panikkar
- Advertisement -

ಮ0ಗಳೂರು : ಮಂಗಳೂರಿನ ಕದ್ರಿ ಬಳಿಯ ಪಿಂಟೋಸ್ ಲೇನ್‌ನಲ್ಲಿ ನಡೆದ ದಂಪತಿಗಳ ಆತ್ಮಹತ್ಯೆ ಬೆನ್ನಲ್ಲೇ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಬಡ್ಡಿ ಮಾಫಿಯಾಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆತ್ಮಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಈ ಹೇಳಿಕೆ ನೀಡಿದ್ದಾರೆ.

ಆರ್ಥಿಕ ಮುಗ್ಗಟ್ಟಿನಲ್ಲಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಕೆಟ್ಟ ನಿರ್ಧಾರವಾಗಿದೆ. ಈ ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಜನರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ನಡುವೆ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡ್ತಿರೋದು ಗಮನಕ್ಕೆ ಬಂದಿದೆ.

ಇಂಥವರ ವಿರುದ್ಧ ಎಕ್ಸೋರ್ಬಿಟಂಟ್ ರೇಟ್ ಆಫ್ ಇಂಟ್ರೇಸ್ಟ್ ಆಕ್ಟ್ ನಡಿ ಪ್ರಕರಣ ದಾಖಲಿಸಲು ಅವಕಾಶ ಇದೆ. ಅತಿಯಾದ ಬಡ್ಡಿ ವಸೂಲಿಗೆ ಒತ್ತಡ , ಬೆದರಿಕೆ ಹಾಕಿದಲ್ಲಿ ಸ್ಥಳೀಯ ಠಾಣೆಗೆ ದೂರು ನೀಡಬಹುದು. ಇಂತಹ ರಿಸ್ಕ್ ತೆಗೆದುಕೊಳ್ಳದೇ ಸುರಕ್ಷಿತ ಹಣಕಾಸು ವ್ಯವಹಾರ ಮಾಡಿದರೆ ಉತ್ತಮ ಎಂದು ಹೇಳಿದರು.

- Advertisement -

Related news

error: Content is protected !!