Saturday, May 11, 2024
spot_imgspot_img
spot_imgspot_img

ಹಣಕಾಸಿನ ವಿಚಾರದಲ್ಲಿ ಗಲಾಟೆ; ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ..!

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg

ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಮಗು ಸಾವನ್ನಪ್ಪಿರುವ ಘಟನೆ ಬೆಳಗಾವಿ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಗು ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಎಂದು ಗುರುತಿಸಲಾಗಿದೆ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕಕ್ಕೇರುತ್ತಿದ್ದಂತೆ ಮೂರು ವರ್ಷದ ಮಗುವಿನ ಎದೆ ಮೇಲೆ ಜೋತಿಭಾ ತುಕಾರಾಮ ಬಾಬಾಬರ ಎಂಬಾತ ಕಾಲಿಟ್ಟು ಸಾಯಿಸಿದ್ದಾನೆ ಎನ್ನಲಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಐಗಳಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನೂ ಅರಿಯದ ಕಂದಮ್ಮನ ಜೀವ ಬಲಿಯಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಹೃದಯ ವಿದ್ರಾವಕ ಘಟನೆಯಿಂದ ಇಡೀ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನೀರವ ಮೌನ ಆವರಿಸಿದೆ.

- Advertisement -

Related news

error: Content is protected !!