Thursday, April 18, 2024
spot_imgspot_img
spot_imgspot_img

ಹುಂಡಿ ಅಪವಿತ್ರ ದುಷ್ಕೃತ್ಯ: ಉಳ್ಳಾಲ ಕೊಂಡಾಣ ಪಿಲಿಚಾಮುಂಡಿ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ

- Advertisement -G L Acharya panikkar
- Advertisement -

ಉಳ್ಳಾಲ: ಕರಾವಳಿ ಭಾಗದಲ್ಲಿ ದೇವಸ್ಥಾನ- ದೈವಸ್ಥಾನಗಳ ಹುಂಡಿ ಅಪವಿತ್ರ ನಡೆಸುವ ಕೃತ್ಯ ಮತ್ತೆ ಮುಂದುವರಿದಿದೆ. ಇದೀಗ ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಥಾನದ ಆಡಳಿತ ಸಮಿತಿ ಇಂದು ಹುಂಡಿಯನ್ನು ಒಡೆಯುವ ಸಮಯ ಈ ವಿಚಾರ ಬೆಳಕಿಗೆ ಬಂದಿದೆ.

ಕೆಲ ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಅದರಲ್ಲಿ ಒಬ್ಬ ಆರೋಪಿ ರಕ್ತ ವಾಂತಿ ಮಾಡಿ ಸಾವನ್ನಪ್ಪಿದ್ದ. ಮತ್ತಿಬ್ಬರು ತಪ್ಪೊಪ್ಪಲು ದೈವದ ಮುಂದೆ ಬಂದಿದ್ದಾರೆ. ಪೊಲೀಸರು ಅಪರಾಧಿಗಳನ್ನು ವಶಕ್ಕೆ ಪಡೆದಿದ್ದಾರೆ. ಒಂದು ಘಟನೆ ಮಾಸುವ ಮುಂಚೆಯೇ ಈ ಕೃತ್ಯ ಬೆಳಕಿಗೆ ಬಂದಿದ್ದು ಎಲ್ಲರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

ಅದೇ ಸಂದರ್ಭದಲ್ಲಿ ಕಾರಣಿಕ ಕ್ಷೇತ್ರ ಕೊಂಡಾಣ ದೈವಸ್ಥಾನದಲ್ಲಿಯು ಆರೋಪಿಗಳು ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

driving
- Advertisement -

Related news

error: Content is protected !!