

ಪುತ್ತೂರು ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಸಾಧಿಸಿದ 12 ಮಂದಿ ನಿರ್ದೇಶಕರನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು. ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಜಯ ಪಡೆದಿದ್ದಾರೆ.
ನಿರ್ದೇಶಕರಾಗಿ ಆಯ್ಕೆಗೊಂಡ ಪ್ರಕಾಶ್ಚಂದ್ರ ರೈ ಕೈಕಾರ, ಉಮೇಶ್ ಗೌಡ, ವಿನೋದ್ ಕುಮಾರ್ ಶೆಟ್ಟಿ ಅರಿಯಡ್ಕ, ವಸಂತ ಕುಮಾರ್, ರಾಜೀವಿ ರೈ, ಅಮರನಾಥ ರೈ, ಸಂತೋಷ್ ಆಳ್ವ, ಶಿವರಾಮ ಗೌಡ, ಮಲ್ಲಿಕಾ, ಶ್ರೀನಿವಾಸ ಪ್ರಸಾದ್ ರನ್ನು ಅಭಿನಂದಿಸಲಾಯಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ ಬಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಜಿಲ್ಲಾ ಎಸ್ಟಿ ಮೋರ್ಛ ಅಧ್ಯಕ್ಷ ಹರೀಶ್ ಬಿಜತ್ರೆ , ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ , ನೆಟ್ಟಣಿಗೆ ಮುಡ್ನೂರು ಮಹಾಶಕ್ತಿಕೇಂದ್ರ ಅಧ್ಯಕ್ಷ ರಾಜೇಶ ಪರ್ಪುಂಜ, ಒಳಮೊಗ್ರು ಶಕ್ತಿಕೇಂದ್ರ ಅಧ್ಯಕ್ಷ ಮಾದವ ರೈ ಕುಂಬ್ರ ಹಿರಿಯರಾದ ಸುರೇಶ್ ಆಳ್ವ , ದರ್ಬೆ ಮಹಾಶಕ್ತಿಕೇಂದ್ರ ಅಧ್ಯಕ್ಷೆ ಶ್ರೀ ಮತಿ ದೀಕ್ಷಾ ಪೈ , ಪ್ರಮುಖರಾದ ಮರಳಿಕೃಷ್ಣ ಹಸಂತಡ್ಕ , ಆರ್ಯಾಪು ಮಹಾಶಕ್ತಿಕೇಂದ್ರ ಅಧ್ಯಕ್ಷ ವಿಜಯ ಬಿಎಸ್ ಉಪಸ್ಥಿತರಿದ್ದರು.








