ವಿಟ್ಲ: ಮಾಣಿ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ದೀಪ ಬೆಳಗಿಸಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಶ್ರೀಮತಿ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ವಲಯ ಅಧ್ಯಕ್ಷರಾದ ಬಾಲಕೃಷ್ಣ ಅಳ್ವ,
ಶ್ರೀಮತಿ ರಮಣಿ ಡಿ ಪೂಜಾರಿ ಮಾಜಿ ಪಂಚಾಯತ್ ಅಧ್ಯಕ್ಷರು,ಶ್ರೀಮತಿ ಪ್ರೀತಿ ಡಿನ್ನ ಪಿರೇರಾ,ಶ್ರೀಮತಿ ಸುನಂದಾ ಗ್ರಾಮ ಪಂಚಾಯತ್ ಸದಸ್ಯರು,ವಿಕೇಶ್ ಶೆಟ್ಟಿ, ದಯಾನಂದ ಪೂಜಾರಿ, ಹಮೀದ್ ಪಾಲ್ಕೆ ,ಸೂರಿಕುಮೇರ್ ಜುಮಾ ಮಸೀದಿಯ ಅಧ್ಯಕ್ಷರಾದ ಅದ್ದುಲ್ ಕೆರೀಂ ಸೂರಿಕುಮೇರ್ ಉಪಸ್ಥಿತರಿದ್ದರು.