- Advertisement -
- Advertisement -
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಓಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರಲ್ಲಿ ಆಶೀರ್ವಾದ ಪಡೆದರು.
ಬಳಿಕ ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರಲ್ಲಿ ಆಶೀರ್ವಾದ ಪಡೆದರು. ಬಳಿಕ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿಯವರಲ್ಲಿ ಆಶೀರ್ವಾದ ಪಡೆದರು.
ವಿಟ್ಲ ಶ್ರೀ ಪಂಚಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ವಿಟ್ಲ ಅರಮನೆಗೆ ಭೇಟಿ ನೀಡಿ ಅರಮನೆಯ ಬಂಗಾರು ಅರಸು ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -