ತೆರೆಯ ಮರೆಯಲ್ಲಿ ನಿಂತು ಭಾಷಣ ತಿರುಚುವ ಕೆಲಸ ಮಾಡಬೇಡಿ ಅಭಿವೃದ್ದಿ ಮಾಡಿದ್ದರೆ ಚರ್ಚೆಗೆ ಬನ್ನಿ; ಬಿಜೆಪಿಗೆ ಅಶೋಕ್ ರೈ ಸವಾಲು
ವಿಟ್ಲದ ಚಂದಳಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ “ನಾನು ರಾಜಕೀಯಕ್ಕೆ ಬಂದ ಮೇಲೆ ಯಾರನ್ನೂ ವೈಯುಕ್ತಿಕವಾಗಿ ದೂಷಿಸುವ ಕೆಲಸವನ್ನು ಮಾಡಿಲ್ಲ, ಈಗಲೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು ಕ್ಷೆತ್ರವನ್ನು ಅಭಿವೃದ್ದಿ ಮಡುವುದಕ್ಕಾಗಿ, ನಾನು ಮಾಡಿದ ಭಾಷಣವನ್ನು ತಿರುಚುವ ಕೆಲಸವನ್ನು ಬಿಜೆಪಿಗರು ತೆರೆಮರೆಯಲ್ಲಿ ಮಾಡುತ್ತಿದ್ದು ನೀವು ಆ ಕೆಲಸವನ್ನು ಬಿಟ್ಟು ನೀವು ಅಭಿವೃದ್ದಿ ಕೆಲಸ ಮಾಡಿದ್ದರೆ ಅದನ್ನು ಚರ್ಚಿಸುವ ಬನ್ನಿ ಎಂದು ಬಿಜೆಪಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಂ ಎಸ್ ಮಹಮ್ಮದ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.