- Advertisement -
- Advertisement -
ಮಂಗಳೂರು : ವಿಧಾನ ಪರಿಷತ್ನಲ್ಲಿ ಗೂಂಡಾಗಿರಿ ನಡೆಸುವ ಮೂಲಕ ಕಾಂಗ್ರೆಸ್ ಪರಿಷತ್ನ ಉನ್ನತ ಪರಂಪರೆಗೆ ಕಳಂಕ ತಂದಿದೆ
ತನ್ಮೂಲಕ ರಾಜ್ಯದ ಜನತೆಗೆ ಅವಮಾನ ಮಾಡಿರುವ ಕಾಂಗ್ರೆಸ್ ಜನತೆಯ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ‘ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯರ ಖಂಡನೀಯ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಕಾಂಗ್ರೆಸ್ ಇತಿಹಾಸವೇ ಗೂಂಡಾಗಿರಿಯ ಇತಿಹಾಸ. ಈ ಹಿಂದೆ ಕಾಂಗ್ರೆಸ್ ವಿಧಾನ ಸಭೆ, ವಿಧಾನ ಪರಿಷತ್ನ ಹೊರಗೆ ಗೂಂಡಾಗಿರಿ ಮಾಡುತ್ತಿತ್ತು. ಈಗ ಒಳಗೂ ಗುಂಡಾಗಿರಿ ಮಾಡುತ್ತಿದೆ’ ಎಂದರು.
- Advertisement -