- Advertisement -
- Advertisement -
ವಿಟ್ಲ: ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಹಲವಾರು ಮಂದಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕೇಪು ವಲಯ ಕಾರ್ಯದರ್ಶಿ ಧನಂಜಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರಾದ ರವಿ ಕೊರತಿಗದ್ದೆ, ನಿತಿನ್, ನವೀನ್, ಲೋಕೇಶ್, ಸೃಜನ್, ನಿಖಿಲ್ ಮೊದಲಾದವರು ಕಾಂಗ್ರೆಸ್ ಬಿಟ್ಟು ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹಾಗೂ ರಾಷ್ಟ್ರೀಯ ಮಹಿಳಾ ಮೋರ್ಚ ಕಾರ್ಯಕಾರಿಣಿ ಸದಸ್ಯೆ ಬಿಂದು ಸುರೇಶ್ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ.
ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಕೇಪು ಶಕ್ತಿ ಕೇಂದ್ರ ಸಂಚಾಲಕ ರಾಧಕೃಷ್ಣ ಶೆಟ್ಟಿ, ಕೇಪು ಪಂಚಾಯತು ಉಪಾಧ್ಯಕ್ಷ ರಾಘವ ಸಾರಡ್ಕ, ಪಂಚಾಯತ್ ಸದಸ್ಯ ಪುರುಷೋತ್ತಮ ಕಲ್ಲಂಗಳ, ಪಕ್ಷದ ಪ್ರಮುಖ ತಾರಾನಾಥ ಆಳ್ವ, ಬೂತ್ ಅಧ್ಯಕ್ಷರ ಅಶೋಕ್, ಪ್ರಮುಖ ಉಮೇಶ್ ಗೌಡ, ಶ್ರೀಕೃಷ್ಣ ಮಣಿಯಾಣಿ, ಚಂದ್ರಶೇಖರ್ ಮೊದಲಾದ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು
- Advertisement -