![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2024/06/karaate-M-682x1024.jpeg)
ಹಾಸನ: ಪೊಲೀಸ್ ಕಾನ್ಸ್ಟೇಬಲ್ವೋರ್ವರು ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು ಕೊಂದು ಹಾಕಿದ ಘಟನೆ ಹಾಸನದಲ್ಲಿ ನಡೆದಿದೆ.
ಚಾಕುವಿನಿಂದ ಇರಿದ ಆರೋಪಿ ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕನಾಥ್ ಹಾಗೂ ಪತ್ನಿ ಮಮತಾ ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್ಸ್ಟೇಬಲ್, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಬಾಳ್ವೆಯ ಹದಗೆಡಿಸಿತ್ತು. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.
ಕಳೆದ ನಾಲೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೆಪ್ ಆಗಿದ್ದಾನೆ.
ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ