![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ ಈ ನಡುವೆ ಆಗಸ್ಟ್ 1ರಂದು ಬಕ್ರೀದ್ ಹಬ್ಬ ಆಚರಣೆ ಮಾಡುವುದಾಗಿ ಹಿಲಾಲ್ ಸಮಿತಿ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಜುಲೈ 31ರಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದೆ.
![](https://vtvvitla.com/wp-content/uploads/2020/07/Add-2-2-1024x513.jpg)
ಗೈಡ್ ಲೈನ್ಸ್ ಹೊರಡಿಸಿದ ಸರ್ಕಾರ:
*ಪ್ರಾರ್ಥನ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
*60 ವರ್ಷಕ್ಕಿಂತ ಮೇಲ್ಪವರು ಹಾಗೂ 10 ವರ್ಷಕ್ಕಿಂತ ಕೆಳಗಿನವರು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು.
*ನಮಾಜ್ ಮಾಡುವಾಗ ಸಾಮಾಜಿಕ ಅಂತರ ಕಡ್ಡಾಯ.
*ಮಸೀದಿ ಪ್ರವೇಶಿಸುವ ಮುನ್ನ ದೇಹದ ತಾಪಾಮಾನ ತಪಾಸಣೆ ಮಾಡಬೇಕು.
*ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ನಿಂದ ಸ್ವಚ್ಛ ಮಾಡಿಕೊಳ್ಳಬೇಕು.
![](https://vtvvitla.com/wp-content/uploads/2020/07/IMG-20200624-WA0014-2.jpg)
*ಮಸೀದಿಗಳಲ್ಲಿ ಧಾರ್ಮಿಕ ಗ್ರಂಥಗಳನ್ನು ಮುಟ್ಟುವಂತಿಲ್ಲ.
*ತಮ್ಮ ಮನೆಗಳಿಂದ ಮುಸಲ್ಲಾವನ್ನು ತರುವುದು ಕಡ್ಡಾಯ.
*ಹಸ್ತಲಾಘನ, ಆಲಿಂಗನ ಮಾಡುವಂತಿಲ್ಲ.
*ಅಪರಿಚಿತರು ಪ್ರಾರ್ಥನೆ ಮಾಡಲು ಬಂದರೆ ಅವರ ಮೇಲೆ ವಿಶೇಷ ಗಮನವಿರಲಿ.
*ಈದ್ಗಾಹ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧ.
*ಪ್ರಾರ್ಥನೆ ವೇಳೆ ಮಸೀದಿಗಳಲ್ಲಿ ಗರಿಷ್ಠ 50 ಜನ ಮೀರಬಾರದು.
*5 ಹೊತ್ತಿನ ನಮಾಜ್ ನಿರ್ಬಂಧ.
*ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ನಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ವಿಲ್ಲ.
![](https://vtvvitla.com/wp-content/uploads/2020/07/20200711_212356_0000-1024x791.png)