- Advertisement -
- Advertisement -
ರಾಜ್ಕೋಟ್: ಗುಜರಾತ್ನ ಆಸ್ಪತ್ರೆಯೊಂದ್ರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ರಾಜ್ಕೋಟ್ನಲ್ಲಿರುವ ಶಿವಾನಂದ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತ್ತು.
ಈ ಆಸ್ಪತ್ರೆಯನ್ನ ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ನಿಗದಿಪಡಿಸಲಾಗಿದೆ. ಅಗ್ನಿ ಅವಘಡ ನಡೆದ ವೇಳೆ ಐಸಿಯುನಲ್ಲಿ 11 ರೋಗಿಗಳು ಇದ್ದರು ಎಂದು ವರದಿಯಾಗಿದೆ.
ರಾಜ್ಕೋಟ್ನ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ರೋಗಿಗಳನ್ನ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಘಟನೆಯಲ್ಲಿ ಹಲವು ರೋಗಿಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರಿಗೆಲ್ಲಾ ಚಿಕಿತ್ಸೆ ಮುಂದುವರೆಸಲಾಗಿದೆ. ಐಸಿಯುನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆ ಕುರಿತು ಸಿಎಂ ವಿಜಯ್ ರೂಪಾನಿ ತನಿಖೆಗೆ ಆದೇಶಿಸಿದ್ದಾರೆ.
- Advertisement -