Saturday, April 20, 2024
spot_imgspot_img
spot_imgspot_img

ಕೊರೊನಾ ರೋಗಿಗಳ ಚಿಕಿತ್ಸೆಗೆ ಸಾಕಷ್ಟು ಸಂಖ್ಯೆಯ ಆ್ಯಂಬುಲೆನ್ಸ್ ಲಭ್ಯವಿರುವ ಬಗ್ಗೆ ರಾಜ್ಯ ಸರಕಾರಗಳು ಭರವಸೆ ನೀಡಬೇಕು-ಸುಪ್ರೀಂ ಕೋರ್ಟ್

- Advertisement -G L Acharya panikkar
- Advertisement -

ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲು ಪ್ರತಿ ಜಿಲ್ಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಆ್ಯಂಬುಲೆನ್ಸ್ ಲಭ್ಯವಿರುವ ಬಗ್ಗೆ ರಾಜ್ಯ ಸರಕಾರಗಳು ಭರವಸೆ ನೀಡಬೇಕು ಎಂದು ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಕೊರೊನಾ ಸೋಂಕಿನ ಕುರಿತ ಆರೋಗ್ಯ ಸೇವೆಗಳನ್ನು ಸುಗಮಗೊಳಿಸುವುದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳನ್ನು ವಿಚಾರಣೆ ನಡೆಸಿದ ಸುಪ್ರೀಂ, ಕೊರೊನಾ ರೋಗಿಗಳಿಗೆ ಆ್ಯಂಬುಲೆನ್ಸ್ ಸೇವೆ ನೀಡುವ ಸಂದರ್ಭ ಅಧಿಕ ಶುಲ್ಕ ವಿಧಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಹಾಗಾಗಿ ಕೊರೊನಾ ರೋಗಿಗಳಿಗೆ ಆ್ಯಂಬುಲೆನ್ಸ್ ಸೇವೆ ನೀಡುವಾಗ ಯೋಗ್ಯ ಶುಲ್ಕ ನಿಗದಿಪಡಿಸಿ, ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲು ಪ್ರತಿ ಜಿಲ್ಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಆ್ಯಂಬುಲೆನ್ಸ್ ಲಭ್ಯವಿರುವ ಬಗ್ಗೆ ರಾಜ್ಯ ಸರಕಾರಗಳು ಭರವಸೆ ನೀಡಬೇಕು ಎಂದು ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಕೊರೊನಾ ರೋಗಿಗಳಿಗೆ ಆ್ಯಂಬುಲೆನ್ಸ್‌ಗಳ ಸಂಖ್ಯೆ ಹೆಚ್ಚಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ದೂರನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಹೆಚ್ಚಿನ ರಾಜ್ಯಗಳು ಆ್ಯಂಬುಲೆನ್ಸ್ ಸೇವೆಗಳನ್ನು ಸುಧಾರಿಸಲು ಪ್ರಯತ್ನಿಸುತ್ತಿರುವಾಗಲೇ ಖಾಸಗಿ ಆ್ಯಂಬುಲೆನ್ಸ್‌ಗಳು ಮಿತಿ ಮೀರಿದ ಶುಲ್ಕ ವಿಧಿಸುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ಈ ಆದೇಶ ಕೊರೊನಾ ರೋಗಿಗಳಿಗೆ ತುಸು ನೆಮ್ಮದಿ ನೀಡಬಹುದಾಗಿದೆ.

- Advertisement -

Related news

error: Content is protected !!