


ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ (NDA) ಸರ್ಕಾರ ರಚನೆ ಆಗುವುದಕ್ಕೆ ಕೌಂಟ್ಡೌನ್ ಶುರುವಾಗಿದೆ. ಇಂದು (ಭಾನುವಾರ) ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.
ಪ್ರಮಾಣವಚನ ಸಮಾರಂಭಕ್ಕೆ ರಾಜ್ಯ, ದೇಶ ಹಾಗೂ ವಿದೇಶಿ ಗಣ್ಯರೂ ಸೇರಿದಂತೆ ಸುಮಾರು 9 ಸಾವಿರ ಗಣ್ಯಮಾನ್ಯರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ 3 ಹಂತಗಳಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಮೋದಿ ಪಟ್ಟಾಭಿಷೇಕ ಇಂದು ಎಲ್ಲಾ ಬಿಜೆಪಿ ಮತ್ತು ಮೈತ್ರಿ ಸಂಸದರೊಂದಿಗೆ ಚಹಾಕೂಟ ಇಂದು ಬೆಳಿಗ್ಗೆ11 ಗಂಟೆಗೆ ನಡೆಯಲಿದೆ. ಪ್ರಮಾಣ ವಚನದಲ್ಲಿ ಭಾಗವಹಿಸುವಂತೆ ಒಟ್ಟು 19 ಸಂಸದರಿಗೆ ಪ್ರಧಾನಿ ಕಛೇರಿಯಿಂದ ಕರೆ ಬಂದಿದೆ. ಕರ್ನಾಟಕದಿಂದ ಮಾಜಿ ಸಿಎಂ, ಮಂಡ್ಯ ಸಂಸದ ಹೆಚ್ಡಿ ಕುಮಾರಸ್ವಾಮಿ ಹಾಗೂ ಧಾರವಾಡ ಸಂಸದ ಪ್ರಲ್ಹಾದ್ ಜೋಶಿ ಪ್ರಮಾಣವಚನಕ್ಕೆ ಕರೆ ಬಂದಿದೆ. ಕೊಯಮತ್ತೂರಿನಿಂದ ಸ್ಪರ್ಧಿಸುತ್ತಿರುವ ಅಣ್ಣಮಲೈಗೂ ಪ್ರಮಾಣವಚನಕ್ಕೆ ಕರೆ ಬಂದಿದೆ. ಅಮಿತ್ ಶಾ ಗೃಹ ಸಚಿವರಾಗಿ ಮುಂದುವರೆಯುತ್ತಾರೆ ಎಂಬ ಮಾಹಿತಿ ಇದೆ. ನಿತಿನ್ ಗಡ್ಕರಿ, ರಾಜ್ನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮಂತ್ರಿಯಾಗಿ ಮುಂದುವರೆಯುವ ಸಾಧ್ಯತೆ ಇದೆ. ಮೋದಿ ಪ್ರಮಾಣ ವಚನಕ್ಕೆ ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ ಖರ್ಗೆಗೆ ಆಹ್ವಾನಿಸಲಾಗಿದೆ. ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜನ ಖರ್ಗೆ ಭಾಗಿಯಾಗುವ ಸಂಭವವಿದೆ.